ಬಿಗ್ ಬ್ರೇಕಿಂಗ್ ನ್ಯೂಸ್: ಮತ್ತೆ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ!!! ರೈತರ ಮೊಗದಲ್ಲಿ ಸಂತಸ!!!
2022ರ ಹೊತ್ತಿಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಂಕಲ್ಪವನ್ನು ನರೇಂದ್ರ ಮೋದಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ನರೇಂದ್ರ ಮೋದಿಯವರು ರೈತರಿಗೆ ಬಂಪರ್ ಕೊಡುಗೆಯನ್ನು ನೀಡುತ್ತಿದ್ದಾರೆ. ಸದ್ಯ ಎಣ್ಣೆಕಾಳು ಬೆಳೆಗಾರರು ಬೆಳೆದ ಬೆಳೆಯ ಬೆಲೆ ಗರಿಷ್ಠ ಬೆಂಬಲ ಬೆಲೆಗಿಂತ ಕುಸಿದರೆ, ಅಂಥ ಸಂದರ್ಭದಲ್ಲಿ ನಷ್ಟದ ಪ್ರಮಾಣವನ್ನು ಪರಿಹಾರ ರೂಪದಲ್ಲಿ ನೀಡುವ 'ಅನ್ನದಾತ ಮೂಲ್ಯ ಸಂರಕ್ಷಣ' ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದೇ ವೇಳೆ ಎಣ್ಣೆಕಾಳು ಬೆಳೆಗಳ ಖರೀದಿಗೆ ಖಾಸಗಿಯವರಿಗೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಅನುವು ಮಾಡಿಕೊಡುವ ಯೋಜನೆಗೂ ಸಂಪುಟ ಒಪ್ಪಿಗೆ ನೀಡಿದೆ. ಈ ಎರಡೂ ಯೋಜನೆಗಳಿಗೆ ಸರ್ಕಾರ 15053 ಕೋಟಿ ರೂಪಾಯಿ ಬಿಡುಗಡೆ ಮಾಡಲು ಸಮ್ಮತಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆಗೆ ಒಪ್ಪಿಗೆ ನೀಡಲಾಯಿತು. ಕಳೆದ ಬಜೆಟ್ನಲ್ಲಿ ರೈತರಿಗೆ ಪೂರ್ಣ ಬೆಂಬಲ ಬೆಲೆ ಒದಗಿಸುವ ಯೋಜನೆಯೊಂದನ್ನು ಜಾರಿಗೊಳಿಸುವ ಭರವಸೆ ನೀಡಲಾಗಿತ್ತು. ಇದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈಗ ಕ್ರಮ ಜರುಗಿಸಲಾಗಿದೆ.
ರೈತರಿಗೆ ನಷ್ಟವಿಲ್ಲ:
ಹೌದು ಈ ಯೋಜನೆಯ ಪ್ರಕಾರ, ಎಣ್ಣೆಕಾಳು ಬೆಳೆದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸಿಗದೇ ಹೋದರೆ ಸಗಟು ಮಾರುಕಟ್ಟೆಯ ದರದಲ್ಲಿ ಉಳಿದ ವ್ಯತ್ಯಾಸದ ದರವನ್ನು ರೈತರಿಗೆ ಸರ್ಕಾರವೇ ಭರಿಸಿಕೊಡಲಿದೆ. ಆ ಮಾಸದ ಸರಾಸರಿ ದರ ಆಧರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿ, ವ್ಯತ್ಯಾಸ ಹಣವನ್ನು ರೈತರಿಗೆ ನೀಡಲಾಗುತ್ತದೆ. ಇದರಿಂದಾಗಿ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ದೊರೆಯದಿದ್ದರು ರೈತರು ನಷ್ಟ ಅನುಭವಿಸುವಂತಿಲ್ಲ.
3 ಅವಕಾಶ: ರೈತರ ಬೆಳೆಗೆ ಹೆಚ್ಚಿನ ಬೆಲೆ ದೊರಕಿಸಿಕೊಡಲು ಕೇಂದ್ರ ಸರ್ಕಾರ, ರಾಜ್ಯಗಳಿಗೆ 3 ಯೋಜನೆಗಳ ಆಫರ್ ನೀಡಿದೆ. ಮೊದಲನೆಯದು, ಹಾಲಿ ಜಾರಿಯಲ್ಲಿರುವ ಕನಿಷ್ಠ ಬೆಂಬಲ ಬೆಲೆ. ಎರಡನೆಯದ್ದು ರೈತರಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಮಾರುಕಟ್ಟೆ ಬೆಲೆ ನಡುವಿನ ವ್ಯತ್ಯಾಸದ ದರವನ್ನು ಸರ್ಕಾರವೇ ತುಂಬಿಕೊಡುವುದು. ಮೂರನೆಯದ್ದು ಖಾಸಗಿ ಪಾಲುದಾರಿಕೆಯಲ್ಲಿ ಖರೀದಿಗೆ ಅವಕಾಶ ಮಾಡಿಕೊಡುವುದು.
ಮೊದಲನೇ ಯೋಜನೆ ಹಾಲಿ ಇರುವ ರೀತಿಯಲ್ಲೇ ಮುಂದುವರೆಯಲಿದೆ. ಒಂದು ವೇಳೆ ರಾಜ್ಯ ಸರ್ಕಾರಗಳು 2ನೇ ಯೋಜನೆ ಆಯ್ದುಕೊಂಡರೆ ರೈತರಿಗೆ ಮಾರಾಟದಲ್ಲಿ ಒಂದು ವೇಳೆ ನಷ್ಟಉಂಟಾದಲ್ಲಿ ಅದನ್ನು ಸರ್ಕಾರವೇ ಭರಿಸಿಕೊಡಲಿದೆ. ಉದಾಹರಣೆಗೆ 1 ಕ್ವಿಂಟಾಲ್ ಸೂರ್ಯಕಾಂತಿ ಬೀಜಕ್ಕೆ 3750 ರು. ಕನಿಷ್ಠ ಬೆಂಬಲ ಬೆಲೆ ಇರುತ್ತದೆ. ಆದರೆ ರೈತನಿಗೆ ಮಾರುಕಟ್ಟೆಯಲ್ಲಿ 3000 ರು. ದರ ಮಾತ್ರ ಸಿಗುತ್ತದೆ. ಆಗ ಸರ್ಕಾರ ಆ ತಿಂಗಳಲ್ಲಿ ಸಗಟು ಮಾರುಕಟ್ಟೆಯಲ್ಲಿ ಇದ್ದ ದರದ ಸರಾಸರಿ ತೆಗೆದು ಆ ಮೂಲಕ ದರವನ್ನು ನಿಗದಿ ಮಾಡಿ ಬಾಕಿ ಮೊತ್ತವನ್ನು ರೈತನಿಗೆ ಪಾವತಿ ಮಾಡುತ್ತದೆ.



Comments
Post a Comment